ರತ್ನಾಕರವರ್ಣಿ
- ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬನಾದ ರತ್ನಾಕರವರ್ಣಿಯ ಕಾಲ ಸುಮಾರು ಕ್ರಿ.ಶ. ೧೫೫೭. (೯ನೇ ತರಗತಿ ಪಠ್ಯಪುಸ್ತಕದಲ್ಲಿ ಈತನ ಕಾಲ ಸು.ಕ್ರಿ.ಶ.೧೫೬೦ ಎಂದಿದೆ)
- ಈತನ ತಂದೆಯ ಹೆಸರು ದೇವರಾಜ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಈತನ ಜನ್ಮಸ್ಥಳ.
- ರತ್ನಾಕರವರ್ಣಿಯು ವಿಜಯನಗರದ ಅರಸರ ಸಾಮಂತರಾಜನಾದ ಕಾರ್ಕಳದ ಭೈರರಾಜನ ಆಸ್ಥಾನದಲ್ಲಿದ್ದ ಕವಿ.
- ರತ್ನಾಕರವರ್ಣಿ ರಚಿಸಿದ ಕೃತಿಗಳು:
- ಭರತೇಶ ವೈಭವ - ರತ್ನಾಕರವರ್ಣಿಯ ಮೇರು ಕೃತಿ.
- ತ್ರಿಲೋಕ ಶತಕ
- ಅಪರಾಜಿತೇಶ್ವರ ಶತಕ
- ರತ್ನಾಕರಾಧೀಶ್ವರ ಶತಕ
- ಸೋಮೇಶ್ವರ ಶತಕ (ಕೆಲ ವಿದ್ವಾಂಸರ ಪ್ರಕಾರ ರತ್ನಾಕರವರ್ಣಿಯು ಈ ಕೃತಿಯನ್ನು ತನ್ನ ಬದುಕಿನ ಸಂದಿಗ್ಧ ಘಟ್ಟವೊಂದರಲ್ಲಿ ಮತಾಂತರಗೊಂಡಾಗ ರಚಿಸಿದ್ದಾನೆ)
ಭರತೇಶ ವೈಭವವು ನಡುಗನ್ನಡ ಸಾಹಿತ್ಯದ ಒಂದು ಶ್ರೇಷ್ಠ ಕೃತಿ. ಇದು ರತ್ನಾಕರವರ್ಣಿಯ ಮೇರು ಕೃತಿ. ಹಳೆಗನ್ನಡದ ಕವಿಗಳು ಛಂದಸ್ಸುಗಳಲ್ಲಿ ತೋಯ್ದ ಘನವಾದ ಕೃತಿಗಳನ್ನು ರಚಿಸುತ್ತಿದ್ದ ಕಾಲದಲ್ಲಿ ರತ್ನಾಕರವರ್ಣಿಯು ಸಾಂಗತ್ಯರೂಪದಲ್ಲಿ ಭರತೇಶ ವೈಭವವನ್ನು ರಚಿಸಿ ಕನ್ನಡ ಕಾವ್ಯದ ಹೊಸ ಶಕೆಯೊಂದಕ್ಕೆ ನಾಂದಿ ಹಾಡುತ್ತಾನೆ.
